FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Friday, March 27, 2015

SEND OFF VII STUDENTS

ಏಳನೇ ತರಗತಿ ಮಕ್ಕಳ ಬೀಳ್ಕೊಡುವ ಸಮಾರಂಭ ಇಂದು ಶಾಲಾ ಸಭಾಂಗಣದಲ್ಲಿ ಶಾಲಾ ಪ್ರಬಂಧಕ ಶ್ರೀ ಯನ್  ಸುಬ್ಬಣ್ಣ ಭಟ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಶಾಲಾ ಮೇನೇಜರ್ ಶ್ರೀಮತಿ ವಿಜಯಶ್ರೀ ಬಿ ಮುಖ್ಯ ಅತಿಥಿಯಾಗಿ ಆಗಮಿಸಿದರು. ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಸಮಾರಂಭ ಆರಂಭವಾಯಿತು . ಪ್ರಣವ ಕುಮಾರ್ ಯನ್ ಸ್ವಾಗತ ಭಾಷಣ ಮಾಡಿದನು. ಹೆಚ್ಚಿನ ಮಕ್ಕಳು ತಮ್ಮ ಅನಿಸಿಕೆಗಳನ್ನು ಹೇಳಿದರು. ಅಧ್ಯಾಪಕರು ಮಕ್ಕಳ ಮುಂದಿನ ಶಿಕ್ಷಣಕ್ಕೆ  ಅಶೀರ್ವದಿಸಿ ಹರಸಿದರು. ಕಾರ್ಯಕ್ರಮದ ಕೊನೆಯಲ್ಲಿ ಆದಿತ್ಯ ಇ.ಯಚ್ ವಂದನಾರ್ಪನೆಗೈದನು. ಶಾಲಾ ವಿದ್ಯಾರ್ಥಿ ನಾಯಕಿ ಅಪೂರ್ವ ಎಡಕಾನ ಕಾರ್ಯಕ್ರಮ ನಿರೂಪಿಸಿದಳು.

No comments:

Post a Comment