ಏಳನೇ ತರಗತಿ ಮಕ್ಕಳ ಬೀಳ್ಕೊಡುವ ಸಮಾರಂಭ ಇಂದು ಶಾಲಾ ಸಭಾಂಗಣದಲ್ಲಿ ಶಾಲಾ ಪ್ರಬಂಧಕ ಶ್ರೀ ಯನ್ ಸುಬ್ಬಣ್ಣ ಭಟ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಶಾಲಾ ಮೇನೇಜರ್ ಶ್ರೀಮತಿ ವಿಜಯಶ್ರೀ ಬಿ ಮುಖ್ಯ ಅತಿಥಿಯಾಗಿ ಆಗಮಿಸಿದರು. ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಸಮಾರಂಭ ಆರಂಭವಾಯಿತು . ಪ್ರಣವ ಕುಮಾರ್ ಯನ್ ಸ್ವಾಗತ ಭಾಷಣ ಮಾಡಿದನು. ಹೆಚ್ಚಿನ ಮಕ್ಕಳು ತಮ್ಮ ಅನಿಸಿಕೆಗಳನ್ನು ಹೇಳಿದರು. ಅಧ್ಯಾಪಕರು ಮಕ್ಕಳ ಮುಂದಿನ ಶಿಕ್ಷಣಕ್ಕೆ ಅಶೀರ್ವದಿಸಿ ಹರಸಿದರು. ಕಾರ್ಯಕ್ರಮದ ಕೊನೆಯಲ್ಲಿ ಆದಿತ್ಯ ಇ.ಯಚ್ ವಂದನಾರ್ಪನೆಗೈದನು. ಶಾಲಾ ವಿದ್ಯಾರ್ಥಿ ನಾಯಕಿ ಅಪೂರ್ವ ಎಡಕಾನ ಕಾರ್ಯಕ್ರಮ ನಿರೂಪಿಸಿದಳು.
No comments:
Post a Comment